MENU

Fun & Interesting

Temple visit with family |#prajnaacharya

Prajna Acharya 69,222 3 days ago
Video Not Working? Fix It Now

ಶ್ರೀ ಕ್ಷೇತ್ರ ಪಣೋಲಿಬೈಲು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ, ಸಜೀಪ ಮೂಡ ಗ್ರಾಮದಲ್ಲಿರುವ ದೈವಸ್ಥಾನ. ಇಲ್ಲಿ ತುಳುನಾಡಿನ ದೈವ ಕಲ್ಲುರ್ಟಿ ಕಲ್ಕುಡರನ್ನು ಆರಾಧಿಸಲಾಗುತ್ತಿದೆ.ಇದು ಬಿ.ಸಿ.ರೋಡ್ ದಾಟಿ ಪಾಣೆಮಂಗಳೂರು ಮೆಲ್ಕಾರುನಿಂದ ಬಲಭಾಗಕ್ಕೆ ,ಮಾರ್ನಬೈಲ್ ಮೂಲಕ ಎಡಭಾಗಕ್ಕೆ 4ಕಿ.ಮೀ. ದೂರದಲ್ಲಿ ನೆಲೆಯಾದಂತಹ ತುಳುನಾಡಿನ ಅತ್ಯಂತ ಕಾರಣೀಕ ಅದೇ ರೀತಿ ಪಟ್ಟೆ ಸೀರೆ ಹರಕೆ, ಅಗೆಲು ಕೋಲ ಮಲ್ಲಿಗೆ ಹೂ, ಬೆಳ್ಳಿ ಬಂಗಾರ ತೆಗೆದುಕೊಳ್ಳುವ ಸಂಪದ್ಭರಿತ ಜೋಡಿ ದೈವಗೆ ಕಲ್ಲುರ್ಟಿ ಕಲ್ಕುಡ ನೆಲೆಯಾಗಿ ಭಕ್ತರನ್ನು ಹರಸುತ್ತಿಹರು. ಪಣೋಲಿಬೈಲ್ ಕಲ್ಲುರ್ಟಿ ಕ್ಷೇತ್ರ ತುಳುನಾಡಿನ ಅತ್ಯಂತ ಶ್ರೀಮಂತ ಕ್ಷೇತ್ರ. ಅಷ್ಟು ಮಾತ್ರವಲ್ಲ, ಬಡವ ಬಲ್ಲಿದನೆಂಬ ಭೇದಭಾವವಿಲ್ಲದೆ ಸರ್ವರನ್ನೂ, ಗೋವುಗಳನ್ನು, ಸ್ತ್ರೀವರ್ಗದ ಅತೀವ ರಕ್ಷಕಿಯಾಗಿ ಮೆರೆಯುತ್ತಿರುವಳು.ಈ ಕ್ಷೇತ್ರ ಇವತ್ತಿನ ದಿನದಲ್ಲಿ ವಾರಕ್ಕೆ ಐದು ದಿವಸ ಇಪ್ಪತ್ತು ಹರಕೆಯ ಕೋಲ ,ಅದೇ ರೀತಿ ವಾರದ ಮೂರು ದಿನ ನಾಲ್ಕು ಸಾವ್ರಕ್ಕೂ ಮಿಕ್ಕಿ ಅಗೆಲು ಸೇವೆ ಹರಕೆಯನ್ನು ಪಡೆಯುತ್ತಿರುವ ಕ್ಷೇತ್ರ. ಮದುವೆ, ವಿದ್ಯೆ, ಕಷ್ಟಕಾರ್ಪಣ್ಯ, ಕಳ್ಳತನ ಉದ್ಯೋಗಕ್ಕೆ ಅಲ್ಲದೆ ಶರೀರದಲ್ಲಿರುವ ಪ್ರೇತಾತ್ಮ ಇನ್ನಿತ್ತರ ದುಷ್ಟಶಕ್ತಿಗಳನ್ನು ಕೋಲದಲ್ಲಿ ವಿಮೋಚನೆಗೊಳಿಸುತ್ತಾರೆ. ಈ ಜಾಗದಲ್ಲಿ ಪಟ್ಟ ಹರಕೆ ಹೇಳುತ್ತಾ ಜನರು ಕಷ್ಟ ಕಳೆಯುತ್ತಾ ಇರುವ ಶ್ರೀ ಕ್ಷೇತ್ರ ಪಣೋಲಿಬೈಲು. ಈ ಪ್ರದೇಶಕ್ಕೆ ಬರುವ ಭಕ್ತರು ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಬ್ರಹ್ಮಣ್ಯ, ನೆಲ್ಯಾಡಿ, ಮಡಿಕೇರಿ, ಮಂಗಳೂರು, ಮಂಜೇಶ್ವರ, ಕಾಸರಗೋಡು, ಉಡುಪಿ, ಕುಂದಾಪುರ, ಕಾರ್ಕಳ, ಮೂಡಬಿದ್ರೆ, ಕೊಡಗು ಮುಂತಾದ ಕಡೆಗಳಿಂದಲ್ಲದೆ ಹೊರಗಿನವರೂ ಈ ಪ್ರದೇಶಕ್ಕೆ ಭೇಟಿ ನೀಡುತ್ತಾರೆ.ಭಕ್ತರು ಹರಿಕೆ ಕಾಣಿಕೆ, ಅಗೇಲು ಕೋಲ,ಬೆಳ್ಳಿ ಬಂಗಾರದ ಸೇವೆಯನ್ನು ಕೊಡುತ್ತಾರೆ. ಆಸ್ತಿ ವಿಚಾರ ತಕರಾರು, ಕೋರ್ಟ್ ವಿಚಾರ ಇನ್ನಿತರ ಕಷ್ಟ ಕಾರ್ಪಣ್ಯದಲ್ಲಿದ್ದವರು ಈ ಕ್ಷೇತ್ರಕ್ಕೆ ಬಂದು ದೈವದ ಮುಂದೆ ತಮ್ಮ ಕಷ್ಟ ಕಾರ್ಪಣ್ಯವನ್ನು ತೋಡಿಕೊಂಡು ಹರಕೆಯನ್ನು ಹೇಳಿಕೊಳ್ಳುತ್ತಾರೆ. #prajnaacharya #dhanrajachar #familychannel #traveling

Comment